ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆಯೊಂದನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕುಶಾಲನಗರ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ.
ಶನಿವಾರ ರಾತ್ರಿ ಈ ಕೃತ್ಯ ನಡೆದಿದ್ದು, ಸುಮಾರು 30 ವರ್ಷದ ಹೆಣ್ಣಾನೆ ದುಷ್ಕರ್ಮಿಗಳ ಅಟ್ಡಹಾಸಕ್ಕೆ ಬಲಿಯಾಗಿದೆ.
ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿ’ಸೋಜಾ,, ದೇವಯ್ಯ, ರಂಜನ್ ಹಾಗೂ ಆರ್ ಆರ್ ಟಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳಿಗಾಗಿ ಶೋಧ ನಡೆದಿದೆ.