ಹಗಲಲ್ಲೇ ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ ಕಾಡಾನೆಗಳು: ತೋಟದ ಕೆಲಸಕ್ಕೆ ತೆರಳಲು ಕಾರ್ಮಿಕರ ಹಿಂದೇಟು

ಹೊಸದಿಗಂತ ವರದಿ ಹಾಸನ: ಬೇಲೂರು ತಾಲೂಕು ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಳವಳ್ಳಿ ಎಸ್ಟೇಟ್ ಸಮೀಪದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿರುವುದು ರೈತರು ಹಾಗೂ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಮಳವಳ್ಳಿ ಎಸ್ಟೇಟ್ ಬಳಿಯ ಬೇಲೂರು ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಸತೀಶ್ ಹಾಗೂ ಭುವನೇಶಯ್ಯನವರಿಗೆ ಸೇರಿದ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ನಿರಂತರವಾಗಿ ಸಂಚರಿಸುತ್ತಿದ್ದು, ಹಗಲು ವೇಳೆಯಲ್ಲಿಯೇ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿವೆ ಎನ್ನಲಾಗಿದೆ. ಇದರಿಂದ ತೋಟದ ಕೆಲಸಗಳಿಗೆ ತೆರಳುವ ಕೂಲಿ ಕಾರ್ಮಿಕರು ಜೀವಭಯದಿಂದ ಹಿಂದೇಟು ಹಾಕುವ … Continue reading ಹಗಲಲ್ಲೇ ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ ಕಾಡಾನೆಗಳು: ತೋಟದ ಕೆಲಸಕ್ಕೆ ತೆರಳಲು ಕಾರ್ಮಿಕರ ಹಿಂದೇಟು