ಇಂದು ಬಾಗಲಕೋಟೆಗೆ ಸಿಎಂ ಬೊಮ್ಮಾಯಿ, ಜೊತೆಗಿರ್ತಾರಾ ಕಿಚ್ಚ ಸುದೀಪ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಇರುವಂತೆ, ಎಲ್ಲ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನೆರಡು ದಿನದಲ್ಲಿ ನಾಮಪತ್ರ ಸಲ್ಲಿಕೆ ಮಾಡಬೇಕಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಲಕೋಟೆಗೆ ಭೇಟಿ ಕೊಡ್ತಿದ್ದಾರೆ.

ಮುಧೋಳ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹಾಗೂ ಬೀಳಗಿ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ್ ನಿರಾಣಿ ಇಂದು ನಾಮಪತ್ರ ಸಲ್ಲಿಸಲಿದ್ದು, ಇವರ ಜೊತೆಗೆ ನಟ ಕಿಚ್ಚ ಸುದೀಪ ಕೂಡ ಭಾಗಿಯಾಗುವ ಸಾಧ್ಯತೆ ಇದೆ. ಬಾಗಲಕೋಟೆಗೆ ಆಗಮಿಸಿ ರೋಡ್‌ಶೋಗಳಲ್ಲಿ ಸುದೀಪ ಭಾಗಿಯಾಗುವ ಸಾಧ್ಯತೆಯಿದ್ದು, ಸುದೀಪ್ ಎಂಟ್ರಿಗಾಗಿ ಬಾಗಲಕೋಟೆ ಕಾಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!