ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ನ ತನಿಖೆ ತೀವ್ರಗೊಳಿಸಿದ್ದು, ಸಾಕಷ್ಟು ಪ್ರಮುಖ ಸಾಕ್ಷಿಗಳು ಪೊಲೀಸರ ಕೈ ಸೇರಿವೆ.
ಆರೋಪಿಗಳನ್ನು ಇಂದು ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ. ಇಂದು ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ಪ್ರಾಯಶಃ ದರ್ಶನ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಸ್ವಇಚ್ಛಾ ಹೇಳಿಕೆ ದಾಖಲು ಮಾಡಲಾಗಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಕಿಡ್ನ್ಯಾಪ್ ಆದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮುಗಿದಿದೆ. ಸಾಂಧರ್ಬಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ, ಭಾನುವಾರ ಆರೋಪಿಗಳನ್ನ ಜಡ್ಜ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಆಂಡ್ ಗ್ಯಾಂಗ್ ಶಿಫ್ಟ್ ಆಗ್ತಾರಾ? ಕಾದುನೋಡಬೇಕಿದೆ.