ಹಿಜಾಬ್ ವಿವಾದ: ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಸುಪ್ರೀಂಕೋರ್ಟ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಮೊದಲು ಕರ್ನಾಟಕ ಹೈಕೋರ್ಟ್ ತನ್ನ ಆದೇಶ ನೀಡಲಿ. ಸೂಕ್ತ ಸಮಯದಲ್ಲಿ ಪ್ರಕರಣ ಕೈಗೆತ್ತಿಕೊಳ್ಳುತ್ತೇವೆ. ಎಲ್ಲರ ಸಾಂವಿಧಾನಿಕ ಹಕ್ಕುಗಳ ರಕ್ಷಣೆ ಮಾಡಬೇಕಿದೆ. ಅದನ್ನು ಖಂಡಿತಾ ಪರಿಗಣಿಸುತ್ತೇವೆ. ಪರೀಕ್ಷೆಗೆ ತೊಂದರೆ ಆಗುವುದಾದರೆ ಸೂಕ್ತ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತೇವೆ. ಈಗ ಅರ್ಜಿಗಳ ತುರ್ತು ವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು. ಸ್ಥಗಿತಗೊಂಡಿದ್ದ ಶಾಲೆಗಳನ್ನು ಪುನರಾರಂಭ ಮಾಡಿ ಎಂದು ಹೈಕೋರ್ಟ್ ಆದೇಶ ನೀಡಿದೆ.
ಹೈಕೋರ್ಟ್ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!