ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ರೈತರಿಗೆ ಅನುಕೂಲ ಮಾಡ್ತೇವೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ಕಾಯ್ದೆಯನ್ನು ಸಂಪೂರ್ಣವಾಗಿ ನಿಷೇಧಿಸಲ್ಲ, ಅದರಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತೇವೆ ಎಂದರು.
ಗೋಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ ಅನಾನುಕೂಲವಾಗಿದೆ. ಬಿಜೆಪಿ ಬಹಳಷ್ಟು ರೈತರಿಗೆ ಅನಾನುಕೂಲ ಮಾಡಿದೆ. ಹೀಗಾಗಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಗೋಹತ್ಯೆ ನಿಷೇಧದಿಂದ ಬಿಜೆಪಿಯವರ ಸಂಘಟನೆಗಳು ಈ ಕಾಯ್ದೆಯ ಮೂಲಕ ಹಣ ವಸೂಲಿ ಮಾಡೋ ದಂಧೆ ಮಾಡಿಕೊಂಡಿದ್ದರು. ಇದೀಗ ರಾಜ್ಯದ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಲ ನಿಮಯಗಳನ್ನು ಸಡಿಲ ಮಾಡುತ್ತೇವೆ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.