ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ನಮ್ಮ ರಾಜ್ಯದಲ್ಲಿ ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕೂಡ ರಾಜ್ಯದಲ್ಲಿ ಬಿಜೆಪಿಯು ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.
ಈ ಚುನಾವಣೆ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ. ದೇಶದಲ್ಲಿ ಅಪಾಯಕಾರಿ ನೀತಿಗಳನ್ನು ಜಾರಿಗೊಳಿಸುತ್ತಿರುವ ಬಿಜೆಪಿ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲು ಮತ ಕೇಳುತ್ತಿದ್ದೇವೆ ಎಂದು ವಿಜಯನ್ ತಿಳಿಸಿದ್ದಾರೆ.
ಕೋಮುವಾದಿ ಧೋರಣೆಗಳ ವಿರುದ್ಧ ಹೋರಾಡಿದ ಇತಿಹಾಸ ಎಡಪಕ್ಷಗಳಿಗೆ ಇದೆ. ‘ಕೆಲವು ಮತಗಳಿಗಾಗಿ ನಾವು ನಮ್ಮ ರಾಜಕೀಯವನ್ನು ಬದಲಾಯಿಸುವುದಿಲ್ಲ’ ಎಂದು ವಿಜಯನ್ ಹೇಳಿದ್ದಾರೆ.