ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣುವವರೆಗೂ ಕೈಬಿಡುವುದಿಲ್ಲ: ವಿಜಯೇಂದ್ರ

ಹೊಸದಿಗಂತ ವರದಿ,ಶಿವಮೊಗ್ಗ :

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಸರ್ಕಾರ ಎಟಿಎಂ ಆಗಲು ಬಿಡುವುದಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಸಚಿವರು ರಾಜೀನಾಮೆ ನೀಡುವ ಮೂಲಕ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಕೈಬಿಡುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.

ಶಿಕಾರಿಪುರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನ ಎಸ್.ಎಲ್.ಭೋಜೇಗೌಡರು ಸ್ಪರ್ಧೆ ಮಾಡಿದ್ದಾರೆ. ವಾತಾವರಣ ಮೈತ್ರಿ ಅಭ್ಯರ್ಥಿ ಗಳ ಪರವಾಗಿದೆ. ಇಬ್ಬರ ಗೆಲುವು ಖಚಿತ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!