ಹೊಸದಿಗಂತ ವರದಿ ತುಮಕೂರು :
ತುಮಕೂರು ಜಿಲ್ಲೆಯ ಹೆಸರನ್ನು ಬದಲಾಯಿಸಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಹುಟ್ಟು ಹಬ್ಬದಲ್ಲಿ ಮಾತನಾಡಿದ ಅವರು, ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಅಂತ ಕೇಳಿದಾಗ ನಾನು ಆದರೂ ಆಗಬಹುದು ಅಂತ ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆ ಅಂತ ನಾನು ಹೇಳಿರಲಿಲ್ಲ.
ತುಮಕೂರಿನ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಅದಕ್ಕೆ ಅದರದೇ ಆದಂತ ಇತಿಹಾಸ ಸಂಸ್ಕೃತಿ ಇದೆ. ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ. ಬೆಂಗಳೂರು ವ್ಯಾಪ್ತಿಗೆ ಸೇರಿಸುವ ಪ್ರಶ್ನೆಗೆ ನಾನು ಉತ್ತರಿಸಿದ್ದೆ ಆದರೂ ಆಗಬಹುದು ಎಂದಿದ್ದೆ ಆದರೆ ತುಮಕೂರು ಹೆಸರು ಬದಲಾಯಿಸುತ್ತೇವೆ ಅಂತ ಹೇಳಿಲ್ಲ ಜಿಲ್ಲೆಯ ಹೆಸರು ಯಾವುದೇ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ. ಅದಕ್ಕಾಗಿ ತುಮಕೂರು ಹೆಸರನ್ನು ಯಾವುದೇ ಕಾರಣಕ್ಕೂ ಎಷ್ಟೇ ಬದಲಾವಣೆ ಅಭಿವೃದ್ಧಿ ಆದರೂ ಹೆಸರನ್ನು ಮಾತ್ರ ಬದಲಾಯಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು.