ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಭರವಸೆ ನೀಡಿದ್ದಾರೆ.
ಶಿವಮೊಗ್ಗ (Shivamogga)ದಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಮೋದಿ ಅವರು ಕೈಗೊಂಡ ನಿರ್ಧಾರಗಳಿಗೆ ಕೈಜೋಡಿಸಿದ್ದೇವೆ. ಹಾಗಾಗಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನ (BJP Candidates) ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದರು.
ಕರ್ನಾಟಕದಲ್ಲಿ ಚುನಾವಣೆ ರಣ ಕಹಳೆ ಮೊಳಗಿಸಿದೆ. ಮೋದಿ ಸರ್ಕಾರ ಚುನಾವಣೆಗೆ ಕೆಲಸ ಮಾಡುವ ಸರ್ಕಾರವಲ್ಲ. ದಿನದ 24 ಗಂಟೆ ವರ್ಷದ 365 ದಿನ ಕೆಲಸ ಮಾಡುವ ಸರ್ಕಾರ. ರೈತರ ಖಾತೆಗೆ ಹಣ ಹಾಕುವ ಮೂಲಕ ಮಂದಹಾಸ ತರುವ ಕೆಲಸ ಮಾಡಿದೆ. ಕಾಶ್ಮೀರದ ಸ್ವಾಯತತ್ತೆಯ ಕನಸಾಗಿದ್ದ ಆರ್ಟಿಕಲ್ 370 (Article 370) ರದ್ದು ಮಾಡಿದ್ದಾರೆ. ಕೋವಿಡ್ ನಂತರ ವಿಶ್ವದ ಅನೇಕ ರಾಷ್ಟ್ರ ಆರ್ಥಿಕವಾಗಿ ಹಿಂದುಳಿದ್ದರೂ, ಭಾರತ ವಿಶ್ವದ ಬಲಿಷ್ಠ ಆರ್ಥಿಕ ದೇಶವಾಗಿ ಬೆಳೆಯುವಂತೆ ಮಾಡಿದ್ದಾರೆ ಎಂದು ಹಾಡಿಹೊಗಳಿದ್ದಾರೆ.