ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು: ಬೈಂದೂರಿನಲ್ಲಿ ಕೆ.ಎಸ್. ಈಶ್ವರಪ್ಪ ವಿಶ್ವಾಸ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿಂದುತ್ವವನ್ನು ಒಪ್ಪಿಕೊಂಡಿರುವ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ನಾನು ಗೆಲುವು ಸಾಧಿಸುವೆ. ಎಂದೆಂದೂ ಕಾರ್ಯಕರ್ತರ ಜೊತೆಗಿರುವೆ, ಕಾರ್ಯಕರ್ತರೂ ನನ್ನ ಕೈಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪ್ಪುಂದದ ಪರಿಚಯದಲ್ಲುರುವ ದೇವಕಿ ಸಭಾಭವನದಲ್ಲಿ ರಾಷ್ಟ್ರ ಭಕ್ತ ಬಳಗ ವತಿಯಿಂದ ಆಯೋಜಿಸಲಾಗಿದ್ದ ಬೈಂದೂರು ಹೋಬಳಿ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಎಂದರು. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೆಲಸಮಾಡುತ್ತಿದೆ, ಇದಕ್ಕೆ ಅಂತ್ಯಹಾಡುವುದಾಗಿ ಹೇಳಿದ್ದಾರೆ.

ರಾಷ್ಟ್ರಭಕ್ತ ಬಳಗ ಬೈಂದೂರು ಇದರ ಮುಖಂಡ ಶ್ರೀಧರ ಬಿಜೂರು, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಗೋಪಾಲ ನಾಡ, ಸುವರ್ಣ ಪೂಜಾರಿ, ಈಶ್ವರಪ್ಪ ಪುತ್ರ ಕಾಂತೇಶ್, ಮೀನುಗಾರ ಮುಖಂಡ ಯಶು ಗಂಗೊಳ್ಳಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಪೂಜಾರಿ, ಪಟ್ಟಣ ಪಂಷಾಯತ್ ಸದಸ್ಯ ಗಣೇಶ್ ರಾವ್, ಪಟ್ಟಣ ಪಂಚಾಯತ್ ಮುಖಂಡ ಗೋಪಾಲ ಗಾಣಿಗ, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!