ಟ್ರ್ಯಾಕ್ಟರ್ ಮಗುಚಿ ಯುವಕ‌ ಸಾವು

ಹೊಸದಿಗಂತ ವರದಿ,ಕುಶಾಲನಗರ:

ಟ್ರ್ಯಾಕ್ಟರ್ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಭುವನಗಿರಿ ಬಳಿ ನಡೆದಿದೆ.
ಭುವನಗಿರಿಯ ನಾಗರಾಜ್ ಎಂಬವರ ಪುತ್ರ ಶಿವರಾಜು ( 21)ಮೃತ ಯುವಕ .
ಕುಶಾಲನಗರ ಪ್ರಥಮ‌ ದರ್ಜೆ ಕಾಲೇಜು ವಿದ್ಯಾರ್ಥಿಯಾಗಿರುವ ಶಿವರಾಜು ಕೂಡಿಗೆಯ ಶಶಿಧರ್ ಎಂಬವರಿಗೆ ಸೇರಿದ ಟ್ರ್ಯಾಕ್ಟರ್ ಚಾಲನೆ ಮಾಡುವ ಸಂದರ್ಭ ನಿಯಂತ್ರಣ ತಪ್ಪಿ ಮಗುಚಿಕೊಂಡಿದೆ.
ಘಟನೆಯಲ್ಲಿ ತಲೆಗೆ ಗಂಭೀರ ಗಾಯ ಉಂಟಾಗಿ ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.
ಸ್ಧಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ, ವೃತ್ತ ನಿರೀಕ್ಷಕ ಮಹೇಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!