ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು.