ಚಳಿಗಾಲದ ಅಧಿವೇಶನ: ಐದನೇ ದಿನವೂ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಳಿಗಾಲದ ಅಧಿವೇಶನದ ಐದನೇ ದಿನವಾದ ಇಂದು ಕೂಡ ಸಾಲು ಸಾಲು ಪ್ರತಿಭಟನೆ ನಡೆಯುತ್ತಿದೆ.
ಒಕ್ಕಲಿಗ ಸಮುದಾಯ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದು, ಸದ್ಯಕ್ಕೆ ಪ್ರತಿಭಟನೆ ಶಾಂತವಾಗಿದೆ.

ಅಧಿವೇಶನದ ಮೊದಲ ದಿನದಿಂದ ಈವರೆಗೂ ಸಾಲು ಸಾಲು ಪ್ರತಿಭಟನೆ ನಡೆಯುತ್ತಲೇ ಇದೆ. ಇಂದು 11 ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಎರಡು ಸಂಘಟನೆಗಳು ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿವೆ.
ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದ್ದು, ಇತ್ತ ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಿ ಎಂದು ಮತ್ತೊಂದು ವರ್ಗ ಆಗ್ರಹಿಸಿದೆ.

ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಿ ಎಂದು ಸ್ವಾಭಿಮಾನಿ ರೈತ ಸಂಘ ಒತ್ತಾಯಿಸಿದೆ. ಹೀಗೆ ಇಂದು ಕೂಡ ಸಾಲು ಸಾಲು ಪ್ರತಿಭಟನೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!