ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಈ ವೇಳೆ ಸಾವರ್ಕರ್ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.
ಇದೀಗಚಳಿಗಾಲದ ಅಧಿವೇಶನದಲ್ಲಿ ಮತ್ತೆ ಸಾವರ್ಕರ್ ವಿಷಯ ಜೋರಾಗುವ ಸಾಧ್ಯತೆ ಇದೆ. ವಿಧಾನಸಭೆಯಲ್ಲಿ ಗಾಂಧೀಜಿ, ನೆಹರೂ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಜೊತೆಗೆ ಸಾವರ್ಕರ್ ಫೋಟೋ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.
ಈಗಾಗಲೇ ವಿಧಾನಸಭೆಯ ಸಿಬ್ಬಂದಿ ಎಲ್ಲಾ ಫೋಟೋಗಳಿಗೆ ಕರ್ಟನ್ ಹಾಕಿ ಮುಚ್ಚಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ಅಧಿವೇಶನ ಆರಂಭಕ್ಕೂ ಮುನ್ನವೇ ಸಾವರ್ಕರ್ ಫೋಟೋ ಅನಾವರಣವಾಗಲಿದೆ ಎನ್ನಲಾಗಿದೆ.