ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಯಿಂದ ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.
‘ಮನ್ ಕಿ ಬಾತ್’ ನ 121 ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಕಾಶ್ಮೀರ ಮತ್ತು ರಾಷ್ಟ್ರದ ಶತ್ರುಗಳು ಈ ಪ್ರದೇಶದ ಗಮನಾರ್ಹ ಪ್ರಗತಿಯನ್ನು ಹಳಿತಪ್ಪಿಸಲು ನಡೆಸಿದ ಹತಾಶ ಪ್ರಯತ್ನವಿದು. ದೇಶದ 140 ಕೋಟಿ ಜನರ ಒಗ್ಗಟ್ಟು, ಸಂಕಲ್ಪದಿಂದ ಉಗ್ರರನನ್ನು ಸದೆಬಡಿದು ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಕೊಡಿಸುತ್ತೇವೆ” ಎಂದು ಪ್ರಧಾನಿ ಶಪಥ ಮಾಡಿದ್ದಾರೆ.