ಸಿಡಿಲಬ್ಬರಕ್ಕೆ ಮಹಿಳೆ, 48 ಕುರಿಗಳು ಬಲಿ, ಜಿಲ್ಲಾಡಳಿತದಿಂದ ರೂ.6 ಲಕ್ಷ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಅಬ್ಬರದ ಮಳೆ ಆರಂಭವಾಗಿದೆ. ಕೆಲವು ಕಡೆ ಮಳೆಯಿಂದ ಸಂತಸವಾಗಿದ್ದರೆ ಹಲವು ಕಡೆ ಅನಾಹುತಗಳು ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಸಿಡಿಲು ಬಡಿದು ಮಹಿಳೆ ಹಾಗೂ 48ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಮೃತರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ 6 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಗಣಗಲು ಗ್ರಾಮದ ರತ್ನಮ್ಮ(55) ಮೃತ ದುರ್ದೈವಿ. ರತ್ನಮ್ಮ ಅವರಿಗೆ ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮರಣೋತ್ತರ ಪರೀಕ್ಷೆಗೆ ಹೊಸಕೋಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ಸ್ಥಳೀಯ ಪಶುಪಾಲನ ಇಲಾಖೆ ವೈದ್ಯಾಧಿಕಾರಿಗಳು ಕುರಿಗಳ ಕಳೆಬರಹ ಪರೀಕ್ಷೆ ನಡೆಸಿದ್ದಾರೆ.

ಕುರಿಗಾಹಿ ಮಹಿಳೆ ರತ್ನಮ್ಮ ಎಂದಿನಂತೆ ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ತೆರಳಿದ್ದರು. ಮಧ್ಯಾಹ್ನದ ವೇಳೆಗೆ ದಿಢೀರ್ ಮಳೆ ಸುರಿಯಲಾರಂಭಿಸಿದ್ದರಿಂದ ಬೇವಿನ ಮರದಡಿ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದೇ ವೇಳೆ ರತ್ನಮ್ಮನ ಸುತ್ತುವರೆದಿದ್ದ ಅಷ್ಟೂ ಕುರಿಗಳು ಸಿಡಿಲಿಗೆ ಬಲಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!