ಮಹಿಳೆ ಅಪಹರಣ ಕೇಸ್: HD ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಿಳೆ ಅಪಹರಣ ಪ್ರಕರಣದಲ್ಲಿ ಕಸ್ಟಡಿಯಲ್ಲಿರುವ ಶಾಸಕ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನೀಗಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದು, ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ.

ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ FIR ದಾಖಲಾಗಿತ್ತು.

ಕಳೆದ ಎರಡು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ಶಾಸಕ HD ರೇವಣ್ಣ ಅವರನ್ನು ಬಂಧಿಸಲಾಗಿತ್ತು.ಬಂಧನಕ್ಕೂ ಮುನ್ನ ಅವರು ನಿರೀಕ್ಷಣಾ ಜಾಮೀನನ್ನು ಸಲ್ಲಿಸಿದ್ದರು. ಆದರೆ ಅದನ್ನು ಕೋರ್ಟ್ ಅದನ್ನು ಮುಕ್ತಾಯಗೊಳಿಸಿದ್ದು ಇದೀಗ ಬಂಧನದಲ್ಲಿರುವ ರೇವಣ್ಣ ಅವರು ಮತ್ತೆ ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನಾಳೆಗೆ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!