ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರೀತಿಸಿದವನನ್ನು ಮದುವೆಯಾಗಲು ಕೆನಡಾದಿಂದ ಭಾರತಕ್ಕೆ ಬಂದಿದ್ದ ಯುವತಿ ದುರಂತ ಅಂತ್ಯ ಕಂಡಿದ್ದಳು. ತನ್ನ ಪ್ರಿಯಕರನೊಂದಿಗೆ ಇರಲು ಕೆನಡಾದಿಂದ ಭಾರತಕ್ಕೆ ಮರಳಿದ ನಂತರ ಯುವತಿಯೊಬ್ಬಳು ಕಾಣೆಯಾಗಿದ್ದಳು, ಬಳಿಕ ಹರ್ಯಾಣದ ಹೊಲವೊಂದರಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಕಳೆದ ವರ್ಷ ಜೂನ್ನಲ್ಲಿ 23 ವರ್ಷದ ನೀಲಂ ಎಂಬಾಕೆಯನ್ನು ಆಕೆಯ ಗೆಳೆಯ ಸುನಿಲ್ ಗುಂಡಿಟ್ಟು ಕೊಂದಿದ್ದು, ನಂತರ ಆಕೆಯನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದ ಘಟನೆ ನಡೆದಿತ್ತು.
ಆಕೆಯ ಅಸ್ಥಿಪಂಜರದ ಅವಶೇಷಗಳು ಮಂಗಳವಾರ ಭಿವಾನಿಯಲ್ಲಿ ಪೊಲೀಸರಿಗೆ ಪತ್ತೆಯಾಗಿವೆ. ನೀಲಂ ಅವರನ್ನು ಅಪಹರಿಸಿ ಕೊಂದಿರುವುದಾಗಿ ಸುನೀಲ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಅಪರಾಧದಿಂದ ತಪ್ಪಿಸಿಕೊಳ್ಳಲು ಆಕೆಯ ತಲೆಗೆ ಎರಡು ಬಾರಿ ಗುಂಡು ಹಾರಿಸಿ ನಂತರ ಶವವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ರವೀಂದ್ರ ಹೇಳಿದರು.
ಕಳೆದ ಜೂನ್ನಲ್ಲಿ ನೀಲಂ ಸಹೋದರಿ ರೋಶನಿ ಪೊಲೀಸರಿಗೆ ದೂರು ನೀಡಿದ್ದರು. ಆಕೆಯ ಸಹೋದರಿ ತನ್ನ ಇಂಟರ್ನ್ಯಾಷನಲ್ ಇಂಗ್ಲೀಷ್ ಲ್ಯಾಂಗ್ವೇಜ್ ಟೆಸ್ಟಿಂಗ್ ಸಿಸ್ಟಮ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾಳೆ ಮತ್ತು ಕೆಲಸಕ್ಕಾಗಿ ಕೆನಡಾಕ್ಕೆ ತೆರಳಿದ್ದಾಳೆ ಎಂದು ಅವರು ತಿಳಿಸಿದರು.
ಕಳೆದ ವರ್ಷ ಜನವರಿಯಲ್ಲಿ ಸುನೀಲ್ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಭಾರತಕ್ಕೆ ವಾಪಸ್ ಕರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್ ಕೂಡ ನಾಪತ್ತೆಯಾಗಿದ್ದ ಎಂದು ನೀಲಂ ಕುಟುಂಬ ಹೇಳಿದೆ. ದೂರಿನ ನಂತರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.
ನೀಲಂಗಾಗಿ ಹುಡುಕಾಟ ನಡೆಸಿದ ನಂತರ, ಕುಟುಂಬವು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಅವರನ್ನು ಭೇಟಿಯಾಗಿ ಕ್ರಮಕ್ಕೆ ಒತ್ತಾಯಿಸಿತು. ನಂತರ ಪ್ರಕರಣವನ್ನು ಭಿವಾನಿಯಲ್ಲಿರುವ ಅಪರಾಧ ತನಿಖಾ ಸಂಸ್ಥೆಗೆ ವರ್ಗಾಯಿಸಲಾಯಿತು. ಇದೀಗ ಘಟಕವು ಸುನೀಲ್ ನನ್ನು ಬಂಧಿಸಿದೆ. ಮೃತದೇಹವನ್ನು ಸೋನಿಪತ್ ಸಿವಿಲ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.