ಹೊಸದಿಗಂತ ವರದಿ, ಮೈಸೂರು:
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ತೆರಣಿಮುಂಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಪವಿತ್ರ ಆತ್ಮಹತ್ಯೆ ಮಾಡಿಕೊಂಡಾಕೆ.
ಕಳೆದ ಎರಡು ವರ್ಷಗಳ ಹಿಂದೆ ಶಂಕರ್ ಎಂಬಾತನನ್ನು ಈಕೆ ಮದುವೆಯಾಗಿದ್ದಳು. ಮದ್ಯ ವ್ಯಸನಿಯಾಗಿದ್ದ ಪತಿ ಶಂಕರ್ ನಿತ್ಯ ಕುಡಿದು ಮನೆಗೆ ಬಂದು ಗಲಾಟೆ ಮಾಡುತ್ತಿದ್ದ.
ಈ ಕುರಿತು ಎಷ್ಟೇ ಬುದ್ದಿ ಹೇಳಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತಿದ್ದ ಪವಿತ್ರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ನನ್ನ ಸಾವಿಗೆ ನನ್ನ ಗಂಡನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
ಈ ಸಂಬAಧ ಸರಗೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಡೆತ್ ನೋಟ್ ಆಧಾರದ ಮೇಲೆ ಪತಿ ಶಂಕರ್ನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.