ಹಾರಂಗಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ದಿಗಂತ ವರದಿ ಕುಶಾಲನಗರ:

ಮಹಿಳೆಯೊಬ್ಬರು ಹಾರಂಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೂಡಿಗೆಯಲ್ಲಿ ನಡೆದಿದೆ.
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದ ನೂತನ್ (46) ಎಂಬವರೇ ಆತ್ಮಹ್ಯೆಗೆ ಶರಣಾದವರಾಗಿದ್ದು, ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಮಾಜಿ ಸೈನಿಕ‌ ನಾಣಯ್ಯ ಎಂಬವರ ಪತ್ನಿಯಾಗಿರುವ ನೂತನ್ ಅವರು ಸೋಮವಾರ ಬೆಳಗ್ಗೆ ಮನೆಯಿಂದ ಬಂದವರೇ ಕೂಡಿಗೆ ಸಹಕಾರ ಸಂಘದ ಸಮೀಪದಲ್ಲಿ ಹರಿಯುತ್ತಿರುವ ಹಾರಂಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!