ಹೊಸದಿಗಂತ ಬಳ್ಳಾರಿ:
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಮೂವರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದಮ್ಮೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಸಿದ್ದವ್ವ ಲಕ್ಷ್ಮಿ(29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಕ್ಕಳಾದ ಅಭಿಜ್ಞಾ(7), ಅವನಿ(5), ಆರಾಧ್ಯ(3) ಎಂದು ಗುರುತಿಸಲಾಗಿದೆ.
ಮೃತಪಟ್ಟ ಮಹಿಳೆ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಹಸೂರು ಗ್ರಾಮದ ನಿವಾಸಿಯಾಗಿದ್ದು, ಕುರಿ ಕಾಯಲು ದಮ್ಮೂರು ಕಗ್ಗಲ್ ಗ್ರಾಮಕ್ಕೆ ಆಗಮಿಸಿದ್ದರು. ಮೃತಳ ಗಂಡ ಸಂಜಯ್ ಕುಮಾರ್ ಮಹಿಳೆಯ ಮೇಲೆ ಅನುಮಾನ ಪಟ್ಟು ನಿತ್ಯ ಗಲಾಟೆ ಮಾಡುತ್ತಿದ್ದನು. ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ಪಿಎಸ್ಐ ಸುಪ್ರೀತ್ ವಿರುಪಾಕ್ಷಪ್ಪ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ