ಹೊಸದಿಗಂತ, ವರದಿ, ಮೈಸೂರು:
ಗಂಡನ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳ ತಾಳದೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡಿನ ಹೊಸಕೋಟೆಯಲ್ಲಿ ನಡೆದಿದೆ.
ವಿಜಯಲಕ್ಷ್ಮಿ (೩೫) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ೧೨ ವರ್ಷಗಳ ಹಿಂದೆ ಮೈಸೂರು ತಾಲ್ಲೂಕಿನ ಬೊಮ್ಮೇನಹಳ್ಳಿಯಿಂದ ನಂಜನಗೂಡು ತಾಲ್ಲೂಕಿನ ಹೊಸಕೋಟೆಯ ಹರೀಶ್ ಎಂಬಾತನಿಗೆ ವಿಜಯಲಕ್ಷಿ÷್ಮಯನ್ನು ಮದುವೆ ಮಾಡಿಕೊಡಲಾಗಿತ್ತು. ವರದಕ್ಷಿಣೆಯಾಗಿ ಚಿನ್ನಾಭರಣ ಕೊಟ್ಟು ಅದ್ಧೂರಿಯಾಗಿ ಮದುವೆ ಮಾಡಿದ್ದ ಪೋಷಕರು.ಮದುವೆ ನಂತರವೂ ಹಣಕ್ಕಾಗಿ ಪೀಡಿಸುತ್ತಿದ್ದರು.
ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು.
ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ, ಮಹೇಂದ್ರ ಕಿರುಕುಳ ನೀಡುತ್ತಿದ್ದರು.
ಗಲಾಟೆ ವಿಚಾರವಾಗಿ ಈ ಹಿಂದೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ದೂರು ನೀಡಲಾಗಿತ್ತು.
ಹಣಕ್ಕಾಗಿ ಗಂಡ ಅತ್ತೆ, ಮಾವ, ಮೈದುನ ನೀಡುತ್ತಿದ್ದ ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನ ಬಿಟ್ಟು ವಿಜಯಲಕ್ಷ್ಮಿ ಹೊಸಕೋಟೆಯ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ
ಬಿಳಿಗೆರೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.