ದೆವ್ವ ಬಿಡಿಸ್ತೀವಿ ಎಂದು ಮಹಿಳೆಗೆ ಕೊಡಬಾರದ ಹಿಂಸೆ ಕೊಟ್ಟು ಕೊಂದ ಜನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆವ್ವ ಅಂಟಿಕೊಂಡಿದೆ, ಬಿಡಿಸುತ್ತೇನೆಂದು ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ನಡೆದಿದೆ.

ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ.

ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ. ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!