ಹೊಸದಿಗಂತ ವರದಿ ಕಲಬುರಗಿ:
ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಮನೆ ಕುಸಿದು ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಮಹಿಳೆಯೋವ೯ರು ಮೃತಪಟ್ಟ ಘಟನೆ ನಡೆದಿದೆ.
ಆರೀಫಾ ಬೇಗಂ (60) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಆರೀಫಾ ಬೇಗಂ,ಅವರ ಪತಿ ಸರ್ದಾರ್ ಅಲಿ ಬೇಗಂ, ಮಗಳು ಯಾಸ್ಮೀನ್ ಬೇಗಂ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಕಲಬುರಗಿ ಜಿಲ್ಲೆಗೆ ಮೊದಲ ಬಲಿಯಾಗಿದ್ದು, ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಚಿತ್ತಾಪುರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.