ದುಷ್ಕರ್ಮಿಗಳಿಂದ ಮನೆ ಮೇಲೆ ದಾಳಿ: ಮಹಿಳೆ ಹತ್ಯೆ, ಯುವಕನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಂಜಾಬ್‌ ನ ಖೇತಾ ಸಿಂಗ್ ಬಸ್ತಿಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಹಲವು ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮಧು ಗೋಯಲ್ ಮತ್ತು ಆಕೆಯ ಮಗ ವಿಕಾಸ್ ಗೋಯಲ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಅವರ ಮನೆಯಿಂದ ರಕ್ತ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಗುರುಪ್ರೀತ್ ಸಿಂಗ್ ಹೇಳಿದ್ದಾರೆ. ಕುಟುಂಬವು ಪ್ರದೇಶದಲ್ಲಿ ಸಣ್ಣ ದಿನಸಿ ಅಂಗಡಿಯನ್ನು ನಡೆಸುತ್ತಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!