ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರು ಹೇಳಿದನೆಂದು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೈದರಾಬಾದ್ನ ಉಪನಗರ ರಾಜೇಂದ್ರನಗರದಲ್ಲಿ ನಡೆದಿದೆ. ಪೊಲೀಸರ ವರದಿ ಪ್ರಕಾರ, ಅತ್ತಾಪುರದಲ್ಲಿ 35 ವರ್ಷದ ಶಿವಾನಿ ಎಂಬ ಮಹಿಳೆ ಭಿಕ್ಷೆ ಬೇಡುತ್ತಾ ಜೀವನ ಸಾಗಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಎಪ್ರಿಲ್ 11ರ ಮಂಗಳವಾರ ಬೆಳಗ್ಗೆ ದಿಢೀರನೆ ಶಿವಾನಿ ರಸ್ತೆಗೆ ಬಂದಿದ್ದಾಳೆ. ದೇವರು ಹೇಳಿದನೆಂದು ಅವರ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡರು. ಆದರೆ, ಈ ಅನಿರೀಕ್ಷಿತ ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಎಸ್ಐ ಶ್ವೇತಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಶಿವಾನಿ ಅವರನ್ನು ಚಿಕಿತ್ಸೆಗಾಗಿ 108 ವಾಹನದಲ್ಲಿ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯ ಆರೋಗ್ಯ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.