ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆಗೆಂದು ಹೋಗಿದ್ದ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾದಲ್ಲಿ ಸಂಭವಿಸಿದೆ.
ಮದುವೆ ನಡೆಯುವ ಸ್ಥಳದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಅಲ್ಲೇ ಇದ್ದ ಬಾವಿಯ ಮೇಲೆ ಒಂದು ಕಬ್ಬಿಣದ ಸ್ಲ್ಯಾಬ್ ಹಾಕಲಾಗಿತ್ತು. ಇದರ ಮೇಲೆ ಅನೇಕ ಮಹಿಳೆಯರು ಕುಳಿತಿದ್ದು, ಭಾರ ಹೆಚ್ಚಾಗಿ ಸ್ಲ್ಯಾಬ್ ಮುರಿದು ಅದರ ಮೇಲೆ ಕುಳಿತಿದ್ದ ಮಹಿಳೆಯರು ಬಾವಿಗೆ ಬಿದ್ದಿದ್ದಾರೆ. ಈ ದುರ್ಘಟನೆಯಿಂದ ಒಟ್ಟು 13 ಮಹಿಳೆಯರು ಮೃತಪಟ್ಟಿದ್ದಾರೆ.
ಈ ಘಟನೆ ಬುಧವಾರ ರಾತ್ರಿ 8: 30ಕ್ಕೆ ನಡೆದಿದ್ದು, ಮಧ್ಯರಾತ್ರಿವರೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಇದರಿಂದ 15 ಮಹಿಳೆಯರನ್ನು ರಕ್ಷಿಸಲಾಗಿದ್ದು, 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುಶಿನಗರ ಜಿಲ್ಲಾಧಿಕಾರಿ ಎಸ್. ರಾಜಲಿಂಗಮ್ ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.