ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆ ತತ್ತರಿಸಿದ್ದು, ಭದ್ರಾವತಿ ತಾಲೂಕಿನಲ್ಲಿ ಒಂದು ಜೀವಹಾನಿ ಸಂಭವಿಸಿದೆ.ಭಾರೀ ಮಳೆ ಹಿನ್ನಲೆಯಲ್ಲಿ ಕಾಚಿಗೊಂಡನಹಳ್ಳಿಯಲ್ಲಿ ಮೈಮೇಲೆ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಪ್ರಾಥಮಿಕ ಮಾಹಿತಿ ಪ್ರಕಾರ ಸುಜಾತ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.