ಬಿಜೆಪಿ ಪಕ್ಷದಲ್ಲಿ ಮಹಿಳೆಯರು ಸುರಕ್ಷಿತ: ಖುಷ್ಬೂ ಸುಂದರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳುನಾಡಿನಲ್ಲಿ ತಮ್ಮ ಪಕ್ಷದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ನಟಿ ಖುಷ್ಬೂ ಸುಂದರ್ ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಮಿಳುನಾಡು ಬಿಜೆಪಿ ಘಟಕದಲ್ಲಿ ಉಂಟಾದ ಅಸಮಾಧಾನದ ಕುರಿತು ಮಾತನಾಡಿದ ಅವರು, ‘ಎಲ್ಲಾ ಮಹಿಳೆಯರು ಪಕ್ಷವನ್ನು ತೊರೆದಿಲ್ಲ. ನಾನು ಕೂಡ ಪಕ್ಷದಲ್ಲಿದ್ದೇನೆ ಎಂದು ತಿಳಿಸಿದರು.

ಡಿಎಂಕೆಯಲ್ಲಿ ಕೆಲವರು ನನ್ನ ವಿರುದ್ಧ ಕೆಲಸ ಮಾಡಿದ್ದಾರೆ ಮತ್ತು ಬಿಜೆಪಿ ತನ್ನ ಬೆಂಬಲಕ್ಕೆ ನಿಂತಿದೆ. ಅಣ್ಣಾಮಲೈ ಅವರು ಧೈರ್ಯಶಾಲಿ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಅವರು ನನ್ನ ಪರವಾಗಿ ಹೋರಾಡಿದರು ಎಂದು ಖುಷ್ಬೂ ಹೇಳಿದರು.

ಕಳೆದ ವರ್ಷ ಬಿಜೆಪಿಯಿಂದ ಅಮಾನತುಗೊಂಡಿದ್ದ ಗಾಯತ್ರಿ ರಘುರಾಮ್ ಅವರು ಜನವರಿ 3 ರಂದು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು . ಈ ವೇಳೆ ತಮಿಳುನಾಡು ಬಿಜೆಪಿ ಘಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದರು. ಪಕ್ಷ ತೊರೆಯುವ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರನ್ನು ದೂಷಿಸಿದರು.

ಆದರೆ, ಈ ಕುರಿತು ಅಣ್ಣಾಮಲೈ ಪಕ್ಷವನ್ನು ತೊರೆದವರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ ಮತ್ತು ಅಂತಹ ವ್ಯಕ್ತಿಗಳು ಎಲ್ಲೇ ಇದ್ದರೂ ಚೆನ್ನಾಗಿರಲಿ ಎಂದು ಶುಭ ಹಾರೈಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!