ಬೆದರಿಕೆಯಿಂದಾಗಿ ಸಂತ್ರಸ್ತ ಮಹಿಳೆಯರು ಎಸ್‌ಐಟಿ ಮುಂದೆ ಬರ್ತಿಲ್ಲ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಭದಿಸಿದಂತೆ ಸಂತ್ರಸ್ತ ಮಹಿಳೆಯರು ಎಸ್‌ಐಟಿ ಬಳಿ ಹೋಗೋಕೆ ಹಿಂದೆ ಮುಂದೆ ನೋಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಪ್ರಭಾವಿ ರಾಜಕಾರಣಿಗಳ ಬೆದರಿಕೆಯ ಕಾರಣದಿಂದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು ಸಂಪರ್ಕಿಸಲು ಹಿಂದೇಟು ಹಾಕುತ್ತಿದ್ದಾರೆ. ಎಸ್‌ಐಟಿ ಮೊರೆ ಹೋಗಿರುವ ಸಂತ್ರಸ್ತ ಮಹಿಳೆಯರ ಹೆಸರನ್ನು ಬಹಿರಂಗಪಡಿಸಿಲ್ಲ, ಏಕೆಂದರೆ ಅವರು ಪ್ರಬಲ ರಾಜಕಾರಣಿಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಅವರ ಗುರುತುಗಳನ್ನು ಬಹಿರಂಗಪಡಿಸಬಾರದು ಎಂಬುದು ಅವರ ಆಸಕ್ತಿಗೆ ಬಿಟ್ಟ ವಿಚಾರ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!