ಟಿಕೆಟ್ ಖರೀದಿಸದ ಮಹಿಳೆಯರು, ಸಿಎಂಗೆ ಸಾರಿಗೆ ನಿಗಮಗಳಿಂದ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳೇ ಇದೀಗ ತಲೆನೋವಾಗಿ ಪರಿಣಮಿಸಿದೆ. ಮಹಿಳೆಯರಿಗೆ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.

ಸರ್ಕಾರ ಜಾರಿಗೆ ಬಂದಾಕ್ಷಣದಿಂದ ಮಹಿಳಾಮಣಿಗಳು ಬಸ್‌ನಲ್ಲಿ ಕುಳಿತು ಟಿಕೆಟ್ ಹಣ ನೀಡುತ್ತಿಲ್ಲ. ಕಂಡಕ್ಟರ್‌ಗಳ ಜೊತೆಗೆ ವಾದಕ್ಕಿಳಿಯುತ್ತಿದ್ದು, ಇದೊಂದು ದೊಡ್ಡ ತಲೆನೋವಾಗಿದೆ.

ಈ ಹಿನ್ನೆಲೆಯಲ್ಲಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಕಾರ್ಮಿಕರ ಫೆಡರೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ನಮ್ಮ ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!