ಹೊಸ ದಿಗಂತ ಡಿಜಿಟಲ್ ಡೆಸ್ಕ್
ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಜೂ.11 ರಂದು ನಾನ್ ಎಸಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಅಂದಿನಿಂದ-ಇಂದಿನವರೆಗು ನಾನ್ ಎಸಿ ಬಸ್ಗಳು ಫುಲ್ ರಶ್ ಆಗಿವೆ. ಉಚಿತ ಪ್ರಯಾಣ ಹಿನ್ನೆಲೆ ಮಹಿಳೆಯರು ದೇಗುಲ ಹಾಗೂ ಇನ್ನೀತರ ಸ್ಥಳಕ್ಕೆ ತೆರಳುತ್ತಿದ್ದು, ಬಸ್ ಫುಲ್ ಆಗಿವೆ. ಹೀಗೆ ರಶ್ ಆದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಾ ಮುಂದು ತಾ ಮುಂದು ಎಂದು ಬಸ್ ಹತ್ತುವಾಗ ಮಹಿಳಾ ಮಣಿಗಳು ಶಕ್ತಿ ಪ್ರದರ್ಶನ ಮಾಡಿದ್ದು, ಬಸ್ ಬಾಗಿಲನ್ನೇ ಮುರಿದು ಹಾಕಿದ್ದಾರೆ.
ಹೌದು ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆ ಮಲೈ ಮಹದೇಶ್ವರ ಬೆಟ್ಟದತ್ತ ಮಹಿಳೆಯರು ಹೊರಟಿದ್ದು, ಕೊಳ್ಳೇಗಾಲದಲ್ಲಿ ಮಹಿಳೆಯರು ನೂಕು ನುಗ್ಗಲಿನಿಂದ ಜಿದ್ದಿಗೆ ಬಿದ್ದು ಬಸ್ ಹತ್ತಲು ಹೋಗಿ ಬಾಗಿಲನ್ನೇ ಮುರಿದು ಹಾಕಿದ್ದಾರೆ.