ಹೊಸದಿಗಂತ ವರದಿ,ಮಡಿಕೇರಿ:
ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಆತ ಸ್ಥದಲ್ಲಿಯೇ ಸಾವನ್ನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ.
ಚೆಟ್ಟಳ್ಳಿ ಕಾಫಿ ಬೋರ್ಡ್ ಸಮೀಪದಲ್ಲಿರುವ ಕೊಂಗೇಟಿರ ತೋಟದಲ್ಲಿ ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಮೃತನನ್ನು ಮೈಸೂರು ಜಿಲ್ಲೆ ನಂಜನಗೂಡುವಿನ ಕಾರ್ಮಿಕ ಮಣಿ ಎಂದು ಗುರುತಿಸಲಾಗಿದೆ.
ಭಾನುವಾರ ಇವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಬೇರೆ ಕಾರ್ಮಿಕರು ಕಾಪಾತು ಮಾಡುತ್ತಿದ್ದ ಮರ ತುಂಡರಿಸಿ ಬಿದ್ದಿದ್ದು, ಅದರ ಹೊಡೆತಕ್ಕೆ ಸಿಲುಕಿ ಮಣಿ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.