ಕಾರ್ಮಿಕರ ವಿಮಾ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳಿಂದ ಜಾಗ ಪರಿಶೀಲನೆ

ಹೊಸ ದಿಗಂತ ವರದಿ, ಕುಶಾಲನಗರ:

ಕೇಂದ್ರ ಸರ್ಕಾರದ ಕಾರ್ಮಿಕ ವಿಮಾ ಅಸ್ಪತ್ರೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದಲ್ಲಿರುವ 4.5 ಎಕರೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ ಸತೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಜಾಗವನ್ನು ಪರಿಶೀಲನೆ ನಡೆಸಿ ಕಂದಾಯ ಇಲಾಖೆ ವತಿಯಿಂದ ಸರ್ವೆ ನಡೆಸುವಂತೆ ಸೂಚನೆ ನೀಡಿದ್ದರು. ಅದರಂತೆ ಸರ್ವೆ ಕಾರ್ಯ ನಡೆದಿದ್ದು, ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಿಸುವ ದೃಷ್ಟಿಯಿಂದ ಜಾಗದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ನಡೆಸಿದರು.
ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ ಪ್ರಕಾಶ್, ಉಪ ತಹಶಿಲ್ದಾರ ಮಧುಸೂದನ್, ಕಂದಾಯ ನಿರೀಕ್ಷಕ ಸಂತೋಷ್ ,ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯ ಕೆ.ಎಂ. ಚಂದ್ರಶೇಖರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತೇಜಸ್ವಿ, ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್’ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!