ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದಾಳಿ ಬೆನ್ನಲ್ಲೇ ಭಾರತ ದೇಶಾದ್ಯಂತ ಹೈಅಲರ್ಟ್ ಸೂಚಿಸಿದ್ದು 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಪ್ಲ್ಯಾನ್ ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.