ಗೆದ್ದ ಪದಕಗಳನ್ನು ಗಂಗಾನದಿಗೆ ಬಿಡಲು ಮುಂದಾದ ಕುಸ್ತಿಪಟುಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆ ಈಡೇರದಿದ್ದರೆ ಇಂದು ಆರು ಗಂಟೆಗೆ ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಬಿಡಲು ತಯಾರಾಗಿದ್ದೇವೆ ಎಂದು ಕ್ರೀಡಾಪಟುಗಳು ಹೇಳಿದ್ದಾರೆ.

ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದು, ಆರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲು ಹೊರಟಿದ್ದ ಕುಸ್ತಿಪಟುಗಳನ್ನು ವಶಕ್ಕೆ ತೆಗೆದುಕೊಂಡು, ಬಲವಂತವಾಗಿ ತೆರವು ಮಾಡಿಸಿದ್ದಾರೆ.

ಇದರಿಂದಾಗಿ ತೀವ್ರ ನೋವು ಅನುಭವಿಸಿದ ಕುಸ್ತಿಪಟುಗಳು ಇಂದು ಸಂಜೆ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಬಿಟ್ಟು ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

ಹೆಣ್ಣುಮಕ್ಕಳಿಗೆ ಸಾಕಷ್ಟು ಗೌರವ ನೀಡುವ ಪ್ರಧಾನಿ ಮೋದಿ ನಮ್ಮ ಬಗ್ಗೆ ಕಾಳಜಿ ಮಾಡಿಲ್ಲ, ಬ್ರಿಜ್ ಭೂಷಣ್‌ಗೆ ನೂತನ ಸಂಸತ್ ಭವನಕ್ಕೆ ಆಹ್ವಾನ ನೀಡಿದ್ದಾರೆ. ಶುಭ್ರ ಬಿಳಿ ಬಟ್ಟೆ ತೊಟ್ಟು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಇವರ ಬಟ್ಟೆಯ ಬಿಳುಪು ನಮ್ಮ ಕಣ್ಣು ಚುಚ್ಚುತ್ತಿದೆ ಎಂದು ಸಾಕ್ಷಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!