ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಪ್ರತಿಭಟನೆ ನಿರತ ಕುಸ್ತಿಪಟುಗಳ ಮಾತುಕತೆ ಮುಕ್ತಾಯವಾಗಿದ್ದು,ಜೂನ್ 15ರವರೆಗೆ ಧರಣಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಜೂನ್ 15 ರೊಳಗೆ ಪೊಲೀಸರು ತನಿಖೆ ಪೂರ್ಣಗೊಳಿಸುವವರೆಗೂ ನಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಲು ನಮಗೆ ಸೂಚಿಸಲಾಗಿದೆ ಎಂದು ಕುಸ್ತಪಪಟು ಸಾಕ್ಷಿ ಮಲಿಕ್ ಹೇಳಿದರು.
ಕುಸ್ತಿಪಟು ಬಜರಂಗ್ ಪುನಿಯಾ ಪ್ರತಿಕ್ರಿಯೆ ನೀಡಿದ್ದು, ‘ಜೂನ್ 15ರೊಳಗೆ ಪೊಲೀಸ್ ತನಿಖೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ನಮಗೆ ಭರವಸೆ ನೀಡಿದೆ. ಕುಸ್ತಿಪಟುಗಳ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನ ಹಿಂತೆಗೆದುಕೊಳ್ಳಬೇಕೆಂದು ನಾವು ವಿನಂತಿಸಿದ್ದೇವೆ ಮತ್ತು ಅವರು ಅದಕ್ಕೆ ಒಪ್ಪಿದ್ದಾರೆ. ಜೂನ್ 15ರೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನ ಮುಂದುವರಿಸುತ್ತೇವೆ’ ಎಂದು ಹೇಳಿದ್ದಾರೆ.