ಬರಹಗಾರ್ತಿ ಗೀತಾಂಜಲಿಗೆ ಮಹಿಳಾ ರತ್ನ ಪ್ರಶಸ್ತಿ

ಹೊಸದಿಗಂತ ವರದಿ, ಸೋಮವಾರಪೇಟೆ:

ಸ್ವರ್ಣ ಭಾರತಿ ಫೌಂಡೇಶನ್ ಬೆಂಗಳೂರು ಇವರ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ 2025 ರ “ಮಹಿಳಾರತ್ನ ಅವಾರ್ಡ್” ನ್ನು ಲೇಖಕಿ ಗೀತಾಂಜಲಿ ಮಹೇಶ ಅವರಿಗೆ ಪ್ರದಾನ ಮಾಡಲಾಗಿದೆ.

ಪ್ರತಿವರ್ಷ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ “ಮಹಿಳಾ ರತ್ನ” ಅವಾರ್ಡ್ ನ್ನು ನೀಡಿ ಗೌರವಿಸಲಾಗುತ್ತಿದೆ.

ಈ ಸಮಾರಂಭದಲ್ಲಿ ಗೌರವಾನ್ವಿತ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಬೆಂಗಳೂರಿನ ಅಸಿಸ್ಟೆಂಟ್ ಕಮಿಷನರ್ ರಂಗಪ್ಪ, ಟಿರ್ವ9 ನಿರೂಪಕಿ ಸುಕನ್ಯಾ ಹಾಗೂ ಸ್ವರ್ಣ ಭಾರತ್ ಫೌಂಡೇಶನ್ ನ ಅಧ್ಯಕ್ಷ ಡಾಕ್ಟರ್ ರಜನಿಶ್ ಸಂತೋಷ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಯುವ ಲೇಖಕಿ ಗೀತಾಂಜಲಿ ಮಹೇಶ ಅವರು ತಮ್ಮ ಕವನ, ಬರಹಗಳ ಮೂಲಕ ಗುರುತಿಸಿಕೊಂಡಿದ್ದು ಕನ್ನಡದ ಹಲವಾರು ಪತ್ರಿಕೆಗಳಲ್ಲಿ ಇವು ಪ್ರಕಟವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!