ದಳಪತಿಗಳಿಗೆ ಶಾಕ್ ನೀಡಿದ ವೈ.ಎಸ್.ವಿ ದತ್ತಾ: ಜೆಡಿಎಸ್ ನಿಂದ ಕಾಂಗ್ರೆಸ್ ನತ್ತ ಪಯಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ಗೆ ಆಘಾತ ಎದುರಾಗಿದೆ. ಮಾಜಿ ಶಾಸಕ, ಹಿರಿಯ ನಾಯಕ ವೈ.ಎಸ್.ವಿ ದತ್ತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ, ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಹಲವು ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!