ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಇಂದು ರಾಮನ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಎಲ್ಲೆಡೆ ರಾಮನಾಮ ಜಪ, ಹೋಮ, ಹವನಗಳನ್ನು ಕೈಗೊಳ್ಳಲಾಗುತ್ತಿದೆ.
ಕಟೀಲಿನಲ್ಲಿ ಶ್ರೀರಾಮ ತಾರಕ ಮಂತ್ರ ಸಹಿತ ಯಜ್ಞದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭಾಗಿಯಾಗಿದ್ದಾರೆ. ಇಂದು ಮಧ್ಯಾಹ್ನ 12:30ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮಲಲಾ ಮೂರ್ತಿ ಪ್ರಾಣಪ್ರತಿಷ್ಠೆಯಾಗಲಿದ್ದು, ಅದೇ ಸಮಯಕ್ಕೆ ಕರ್ನಾಟದ ದೇಗುಲಗಳಲ್ಲಿಯೂ ವಿಶೇಷ ಪೂಜೆಗಳು ನಡೆಯುತ್ತಿವೆ.