ಯಕ್ಷಧ್ರುವ ಪಟ್ಲ ಫೌಂಡೇಷನ್: ಮಂಗಳೂರು ಪುತ್ತೂರು ಘಟಕದ ಏಳನೇ ವಾರ್ಷಿಕೋತ್ಸವ ಸಂಭ್ರಮ

ಹೊಸದಿಗಂತ ವರದಿ ಪುತ್ತೂರು: 

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು- ಪುತ್ತೂರು 7ನೇ ವಾರ್ಷಿಕೋತ್ಸವ ನಡೆಯಿತು.

ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಶ್ರೀ ಕೆ. ಸೀತಾರಾಮ ರೈ ಸವಣೂರು ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆದಿದ್ದು,  ಅಕ್ಷಯ ಕಾಲೇಜು ಪುತ್ತೂರು ಇದರ ಅಧ್ಯಕ್ಷರಾದ ರೊ| ಜಯಂತ ನಡುಬೈಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ರಾಜ್ಯ ಧಾರ್ಮಿಕ ಪರಿಷತ್ತು ಇದರ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ, ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ಗೌರವ ಉಪಸ್ಥಿತಿಯಲ್ಲಿ ಪುತ್ತೂರು ಘಟಕದ ಅಧ್ಯಕ್ಷರಾದ ಕರುಣಾಕರ ರೈ ದೇರ್ಲ ಇವರು ಸ್ವಾಗತಿಸಿದರು. ಪ್ರಶಾಂತ್ ರೈ ಮುಂಡಾಳಗುತ್ತು ನಿರೂಪಿಸಿ ಸುಬ್ಬಪ್ಪ ಕೈಕಂಬ ಇವರು ವಂದಿಸಿದರು. ಇದೇ ಸಂದರ್ಭದಲ್ಲಿ ಪಾವಂಜೆ ಮೇಳದವರಿಂದ ತ್ರಿಜನ್ಮ ಮೋಕ್ಷ ಯಕ್ಷಗಾನ ಬಯಲಾಟ ಜರಗಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!