ಹೊಸದಿಗಂತ ವರದಿ, ಉಡುಪಿ:
ಬಿಜೆಪಿ ಹಿಂ.ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಾಗು ಪ್ರಮೋದ್ ಮುತಾಲಿಕ್ ಅವರಿಗೆ
ಮಾರಿಗುಡಿ_06 ಎಂಬ ಇನ್ ಸ್ಟಾಗ್ರಾಂ ಖಾತೆಯಿಂದ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಶನಿವಾರ ಪೋಲಿಸರು ಬಂಧಿಸಿದ್ದಾರೆ.
ಮಾರಿಗುಡಿ_06 ಎಂಬ ಇನ್ ಸ್ಟಾಗ್ರಾಂ ಖಾತೆಯಿಂದ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಶನಿವಾರ ಪೋಲಿಸರು ಬಂಧಿಸಿದ್ದಾರೆ.
ಬಜ್ಪೆ ನಿವಾಸಿ ಮಹಮ್ಮದ್ ಶಫಿ ಬಂಧಿತ ಆರೋಪಿ. ಮಂಗಳೂರಿನ ಸುರತ್ಕಲ್ನಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಹಾಜರು ಪಡಿಸಲಾಗಿದೆ. ಈತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಹಮ್ಮದ್ ಶಫಿ ಮಂಗಳೂರಿನ ಬಜ್ಪೆ ನಿವಾಸಿಯಾಗಿದ್ದು, ಸುರತ್ಕಲ್ ಭಾಗದಲ್ಲಿ ಲಾಜಿಸ್ಡಿಕ್ ನಲ್ಲಿ ಕೆಲಸ ಮಾಡುತ್ತಿದ್ದಾನೆ.
ಮಳಲಿ ಮಸೀದಿ ವಿವಾದದ ಬಳಿಕ ಆರೋಪಿಗೆ ಯಶಪಾಲ್ ಸುವರ್ಣ ಮೇಲೆ ಸಿಟ್ಟು ಇರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ಈತನ ಜೊತೆಗೆ ಕೊಲೆ ಬೆದರಿಕೆ ಹಾಕಲು ಸಹಕರಿಸಿದ ಮಹಮ್ಮದ್ ಆಸಿಫ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಎರಡನೇ ಆರೋಪಿ ಮಹಮ್ಮದ್ ಆಸಿಫ್ ಅಲಿಯಾಸ್ ಆಶಿಕ್ ಸದ್ಯ ದುಬೈ ನಲ್ಲಿ ನೆಲೆಸಿದ್ದಾನೆ. ಇದೀಗ ಮಹಮ್ಮದ್ ಶಫಿ ಬಂಧನದ ಬಳಿಕ ಇನ್ಸ್ಟಾಗ್ರಾಮ್ ನ ಮಾರಿಗುಡಿ ಪೇಜ್ ನಲ್ಲಿರುವ ಎಲ್ಲಾ ಪೋಸ್ಟ್ ಡಿಲಿಟ್ ಮಾಡಲಾಗಿದೆ ಎಂದು ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ.