April 28, 2026
Tuesday, April 28, 2026
spot_img

ಹಳೆಯ ದೋಸ್ತಿಗೆ ಯತ್ನಾಳ್ ಸಾಥ್! ಬಾಗಲಕೋಟೆಯಲ್ಲಿ ಚರಂತಿಮಠ ಗೆಲುವಿಗೆ ಶಪಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯ ಕಾವು ಏರುತ್ತಿದ್ದಂತೆ, ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಬಾಗಲಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ್ ಹೆಸರು ಘೋಷಣೆಯಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಬಾಗಲಕೋಟೆ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಯತ್ನಾಳ್ ಘೋಷಿಸಿದ್ದಾರೆ. “ಚರಂತಿಮಠ ಹಾಗೂ ನಮಗೆ ದಶಕಗಳ ಸ್ನೇಹವಿದೆ. ನನ್ನ ಕಷ್ಟದ ಕಾಲದಲ್ಲಿ ಅವರು ಹೆಗಲಿಗೆ ಹೆಗಲು ಕೊಟ್ಟವರು. ಹಿಂದೆ ಅವರಿಗೆ ಟಿಕೆಟ್ ಕೊಡಿಸಲು ನಾನು ಮತ್ತು ಅನಂತಕುಮಾರ್ ಅವರು ಅಂದಿನ ನಾಯಕರಾದ ಯಡಿಯೂರಪ್ಪ ಅವರ ವಿರೋಧದ ನಡುವೆಯೂ ಹೋರಾಡಿದ್ದೆವು. ಅಷ್ಟೇ ಏಕೆ, ಎಲೆಕ್ಷನ್ ಕಮಿಟಿ ಚೇರ್ಮನ್ ಆಗಿದ್ದ ಜಗದೀಶ್ ಶೆಟ್ಟರ್ ಅವರ ಜೊತೆ ಜಗಳ ಮಾಡಿ ಅವರಿಗೆ ಟಿಕೆಟ್ ಕೊಡಿಸಿದ್ದೆ,” ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.

ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಗ್ಗೆ ಮಾತನಾಡಿದ ಯತ್ನಾಳ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ. “ದಾವಣಗೆರೆಯಲ್ಲಿ ಕೊನೆ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಿದರೂ ಆಶ್ಚರ್ಯಪಡಬೇಕಿಲ್ಲ,” ಎನ್ನುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !