ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಒಂದು ವರ್ಷದ ಹಿಂದೆಯೇ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ಈಗಲೂ ಡಯಾಲಿಸಿಸ್ ಮಾಡಿದ ಬಿಲ್ ಪಾವತಿಯಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಪಶ್ಚಿಮಬಂಗಾಳದ ಜಲಪೈಗುರಿ ಜಿಲ್ಲೆಯ ಸದರ್ ಆಸ್ಪತ್ರೆಯಲ್ಲಿ ಈ ವಂಚನೆಯ ಘಟನೆ ನಡೆದಿದೆ. ಈ ಬಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಈ ವಂಚನೆ ಪ್ರಕರಣ ಬಯಲಾಗಿದೆ.
ಘಟನೆಯೇನು? : ಮಾಜಿ ಪೊಲೀಸ್ ಅಧಿಕಾರಿಯಾಗಿದ್ದ ಬಹದ್ದೂರ್ ಬಿಸ್ವಕರ್ಮ ಎಂಬುವರು ಮೂತ್ರಪಿಂಡ ಕಾಯಿಲೆಗೆ ಒಳಗಾಗಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. 1 ವರ್ಷದ ಹಿಂದೆಯೇ ಕಾಯಿಲೆ ಗುಣಮುಖವಾಗದೇ 2021ರ ಜೂನ್ 23ರಂದು ಸಾವನ್ನಪ್ಪಿದ್ದರು. ರೋಗಿ ಮೃತಪಟ್ಟು ವರ್ಷವಾದರೂ ಆತನ ಹೆಸರಿನಲ್ಲೇ ಆಸ್ಪತ್ರೆಯವರು ಮಾತ್ರ ಡಯಾಲಿಸಿಸ್ ಮಾಡುತ್ತಿರುವ ನಕಲಿ ಬಿಲ್ಗಳನ್ನು ಸೃಷ್ಟಿಸಿ ಹಣ ಪಡೆದುಕೊಳ್ಳುತ್ತಿದ್ದರು. ಈ ಬಗ್ಗೆ ಮಾಧ್ಯಮವೊಂದು ಸುದ್ದಿ ಪ್ರಸಾರ ಮಾಡಿತ್ತು.
ಇನ್ನು ಸುದ್ದಿ ಪ್ರಸಾರವಾದ ಬಳಿಕ ತನಿಖೆಗೆ ಮುಂದಾದ ಆರೋಗ್ಯ ಇಲಾಖೆ ಅಧಿಕಾರಿ ಚಂದನ್ ಘೋಷ್ ಎಂಬುವರು ರೋಗಿಯ ರೂಪದಲ್ಲಿ ಚಿಕಿತ್ಸೆಗಾಗಿ ತೆರಳಿ ಈ ವಂಚನೆ ಪತ್ತೆ ಹಚ್ಚಿದ್ದಾರೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ