ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದಿಂದ ಬಳಲುತ್ತಿದ್ದ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ತಾಲೂಕಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ. 75 ವರ್ಷದ ಗಂಗಾಶ್ರೀ ಆನೆಯು ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.
ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ ಗಂಗಾಶ್ರೀ ಆನೆಗೆ ಅನಾರೋಗ್ಯ ಉಂಟಾಗಿತ್ತು. ಹೀಗಾಗಿ ಕೋಲಾರಕ್ಕೆ ಮೂರು ತಿಂಗಳ ಹಿಂದೆ ಚಿಕಿತ್ಸೆಗಾಗಿ ಕರೆತರಲಾಗಿತ್ತು. ಕಳೆದ ಮೂರು ತಿಂಗಳಿಂದ ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿ ಇರುವ ಆನೆಗಳ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ 75 ವರ್ಷದ ಗಂಗಾಶ್ರೀ ಮೃತಪಟ್ಟಿದೆ.