ದಿಗಂತ ವರದಿ ವಿಜಯಪುರ:
ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ದೂರಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ವಿಜಯೇಂದ್ರನಿಂದ ಎಂದು ಆರೋಪಿಸಿದರು.
ವಿಜಯೇಂದ್ರ ಭ್ರಷ್ಟಾಚಾರದಿಂದ ಬಿ.ಎಸ್. ಯಡಿಯೂರಪ್ಪ ಸ್ಥಾನ ಕಳೆದುಕೊಂಡಿದ್ದಾರೆ. ಪಾಪ ಯಡಿಯೂರಪ್ಪ ಅಧಿಕಾರಿ ಕಳೆದುಕೊಂಡರು. ಇಲ್ಲದೇ ಹೋಗಿದರೆ ಅವರೇ ಸಿಎಂ ಇರತಾ ಇದ್ದರು ಎಂದರು. ವಿಜಯೇಂದ್ರ ಯಾವಾಗ ಯಾವಾಗ ಹಗಣರ ಮಾಡಿದ್ದಾರೆ ಆಗ ಬಿ.ಎಸ್. ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ ಎಂದರು.
ಆ ಭ್ರಷ್ಟಾಚಾರದಿಂದ ಬಿಜೆಪಿ ಹೆಸರು ಕೆಟ್ಟಿದೆ. ಯತ್ನಾಳನಿಂದ ಅಲ್ಲ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು ಎಂದರು. ಬಿ.ಎಸ್. ಯಡಿಯೂರಪ್ಪ ಒಳ್ಳೆಯವರು ಇದ್ದಾರೆ. ಆದರೆ ಯಡಿಯೂರಪ್ಪ ಜೈಲಿಗೆ ಸೇರಲು ಕಾರಣ ಅವರ ಮಗ ವಿಜಯೇಂದ್ರ ಎಂದರು.