ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಯಡಿಯೂರಪ್ಪ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿ.ಎಸ್. ಯಡಿಯೂರಪ್ಪ ಅವರು ನಿವೃತ್ತಿ ಘೋಷಿಸಬಾರದು. ಅವರಿಗೆ ಇನ್ನೂ ರಾಜಕೀಯ ಶಕ್ತಿ ಇದ್ದರೂ, ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಿದರು. ಅವರ ನಾಯಕತ್ವದಲ್ಲೇ ಪಕ್ಷ ಹೆಚ್ಚು ಸೀಟುಗಳನ್ನು ಗೆದ್ದಿತ್ತೇ ವಿನಾ ಮತ್ತೊಬ್ಬರ ಹೆಸರಿನಿಂದಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಯಡಿಯೂರಪ್ಪ ಅವರ ಹೆಸರಲ್ಲೇ ಆಪರೇಷನ್ ಕಮಲ‌ ಮಾಡಿ, ಬಿಜೆಪಿಯವರು ಅಧಿಕಾರ ಹಿಡಿದರು. ಕಡೆಗೆ ಅವರೇ ಕಣ್ಣೀರು ಹಾಕಿಕೊಂಡು ರಾಜಭವನಕ್ಕೆ ಹೋಗಿ, ರಾಜೀನಾಮೆ ಕೊಟ್ಟು ಬರುವಂತೆ ಮಾಡಿದರು ಎಂದರು.

ಯಡಿಯೂರಪ್ಪ ಅವರು ಎಷ್ಟೇ ನೊಂದರೂ ತಮ್ಮ‌ ಪಕ್ಷದ ಪರವಾಗಿ ಅಭಿಮಾನದಿಂದಲೇ ಮಾತನಾಡಿಕೊಂಡು ಬಂದಿದ್ದಾರೆ. ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ‌ ಇಟ್ಟು ಕೆಲಸ ಮಾಡಿದ್ದಾರೆ. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!