ಯಡಿಯೂರಪ್ಪ ಪ್ರತಿಭಟನೆ ರಾಜಕೀಯ ಗಿಮಿಕ್: ಸಿಎಂ ಸಿದ್ದರಾಮಯ್ಯ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಮಹದೇವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪನವರಿಗೆ ಧರಣಿ ಮಾಡುವ ಯಾವುದೆ ನೈತಿಕತೆ ಇಲ್ಲ, ಕಾರಣ ಯಡಿಯೂರಪ್ಪ ತಮ್ಮ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಿದ್ರಾ ? ಇಲ್ಲ, ಯಡಿಯೂರಪ್ಪ ಸರ್ಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸಿದ್ರಾ ? ಎಂದು ಪ್ರಶ್ನಿಸಿದ್ದಾರೆ.

ನಾವು ನಮ್ಮ ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಸಿದ್ಧರಿದ್ದೇವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ. ಈ ಕುರಿತು ನಾವು ಈಗಾಗಲೇ ತೀರ್ಮಾನ ಮಾಡಿದ್ದೇವೆ. ಹೀಗಿರುವಾಗ ಯಡಿಯೂರಪ್ಪ ಪ್ರತಿಭಟನೆ ಮಾಡುವುದಾಗಿ ಹೇಳುತ್ತಿರುವುದು ರಾಜಕೀಯ ಗಿಮಿಕ್ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!