ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ.
ಯಡಿಯೂರಪ್ಪ ಅವರ ಪುತ್ರ ಅನ್ನೋ ಆಧಾರದ ಮೇಲೆ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ. ಯಡಿಯೂರಪ್ಪನ ಮಗನಿಗೆ ಅಭಿನಂದನೆಗಳು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲ ಅನ್ನೋದು ಸುಳ್ಳು ಎಂದು ತಿಳಿಯಿತು. ಜನರೇ ನೀವೂ ಇದನ್ನು ನಂಬಿ ಎಂದು ಕಾಲೆಳೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ ರವಿ ಮತ್ತಿತರ ಹೆಸರುಗಳು ಕೇಳಿಬಂದಿತ್ತು. ಇದೀಗ ಹೈಕಮಾಂಡ್ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದೆ.